ಹೇಳಿ ಹೋಗು ಕಾರಣ ಹೋಗುವ ಮೊದಲು
ನನ್ನ ಬಾಳಿನಿಂದ ದೂರಾಗುವ ಮೊದಲು
ಒಲವೆಂಬ ಹಣತೆ ಎದೆಯಲ್ಲಿ ಬೆಳಗಿ
ಬೆಳಕಾದೆ ಬಾಳಿಗೆ
ಇಂದೇಕೆ ಹೀಗೆ ಬೆಳಕನ್ನು ತೊರೆದು
ನೀ ಸರಿದೆ ನೆರಳಿಗೆ
ಇಂದ್ಯಾವ ಬಂಧ ತೊಡರಿದೆ
ನಿನ್ನ ಕಾಲಿಗೆ
ಸುಡುಬೆಂಕಿ ಬೆಳಕು ಉಳಿಯಿತೆ
ನನ್ನ ಪಾಲಿಗೆ
ಸವಿಭಾವಗಳಿಗೆ ನೀ ನಾದ ನೀಡಿ
ಜೊತೆಗೂಡಿ ಹಾಡಿದೆ
ಇಂದ್ಯಾವ ಅಳಲು ಸೆರೆ ಉಬ್ಬಿ ಕೊರಳು
ನೀ ಮೌನ ತಾಳಿದೆ
ನೀ ನೆಟ್ಟು ಬೆಳೆಸಿದ ಈ ಮರ
ಫಲ ತೊಟ್ಟ ವೇಳೆಗೆ
ಹೀಗೇಕೆ ಮುರಿದು ಉರುಳಿದೆ
ಯಾವ ದಾಳಿಗೆ
ಬಿ.ಆರ್. ಲಕ್ಷ್ಮಣರಾವ್
ಈ ಗೀತೆಯನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ
ನನ್ನ ಬಾಳಿನಿಂದ ದೂರಾಗುವ ಮೊದಲು
ಒಲವೆಂಬ ಹಣತೆ ಎದೆಯಲ್ಲಿ ಬೆಳಗಿ
ಬೆಳಕಾದೆ ಬಾಳಿಗೆ
ಇಂದೇಕೆ ಹೀಗೆ ಬೆಳಕನ್ನು ತೊರೆದು
ನೀ ಸರಿದೆ ನೆರಳಿಗೆ
ಇಂದ್ಯಾವ ಬಂಧ ತೊಡರಿದೆ
ನಿನ್ನ ಕಾಲಿಗೆ
ಸುಡುಬೆಂಕಿ ಬೆಳಕು ಉಳಿಯಿತೆ
ನನ್ನ ಪಾಲಿಗೆ
ಸವಿಭಾವಗಳಿಗೆ ನೀ ನಾದ ನೀಡಿ
ಜೊತೆಗೂಡಿ ಹಾಡಿದೆ
ಇಂದ್ಯಾವ ಅಳಲು ಸೆರೆ ಉಬ್ಬಿ ಕೊರಳು
ನೀ ಮೌನ ತಾಳಿದೆ
ನೀ ನೆಟ್ಟು ಬೆಳೆಸಿದ ಈ ಮರ
ಫಲ ತೊಟ್ಟ ವೇಳೆಗೆ
ಹೀಗೇಕೆ ಮುರಿದು ಉರುಳಿದೆ
ಯಾವ ದಾಳಿಗೆ
ಬಿ.ಆರ್. ಲಕ್ಷ್ಮಣರಾವ್
ಈ ಗೀತೆಯನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ
No comments:
Post a Comment