Friday, November 1, 2013

ನಾಡ ದೇವಿಯೇ ಕಂಡೆ ನಿನ್ನ ಮಡಿಲಲ್ಲಿ ಎಂಥ ದೃಶ್ಯಾ

ನಾಡ ದೇವಿಯೇ ಕಂಡೆ ನಿನ್ನ ಮಡಿಲಲ್ಲಿ ಎಂಥ ದೃಶ್ಯಾ
ನೋವು ನಲಿವು ಸಮ್ಮಿಶ್ರದಲ್ಲಿ ಎದೆಯಾಯಿತದಕೆ ವರ್ಷ
ಒ೦ದೆದೆಯ ಹಾಲ ಕುಡಿದವರ ನಡುವೆ ಎಷ್ಟೊಂದು ಭೇಧ ತಾಯೀ
ಒ೦ದೆ ನೆಲದ ರಸ ಹೀರಲೇನು ಸಿಹಿ ಕಹಿಯ ರುಚಿಯ ಕಾಯೀ

ಕತ್ತಲಲ್ಲಿ ಕಂಗೆಟ್ಟು ಎಡವಿ ತಡವರಿಸುತಿರಲು ಮಂದೀ
ಕಡೆಗಣಿಸುತವರ ನಡೆದಿರುವನೊಬ್ಬ ಸ್ವಹಿತಕ್ಕೆ ಹಿರಿದು ದೊಂದಿ
ಸಂಸ್ಕಾರವಿಲ್ಲ ಹೆಣಕೆಂದು ತಲೆಗೆ ಕೈ ಹೊತ್ತ ಬಡವನೊಬ್ಬ
ಇನ್ನೊಬ್ಬ ತಾನು ಆಚರಿಸುತಿರುವ ವೈಭವದ ಹುಟ್ಟುಹಬ್ಬಾ

ಅನ್ನವಿರದ ಹಸುಳೆಗಳ ತಬ್ಬಿ ಅಳುತಿರುವ ತಾಯ ಕಂಡೆ
ದುಃಖ ಪೂರ ಉಕ್ಕುಕ್ಕಿ ಮೊರೆಯೇ ಕೊಚ್ಚಿತ್ತು ಬಾಳ ದಂಡೆ
ನರನನ್ನೆ ಗಾಳವಾಗಿಸಿಯೇ ಬಾಳ ನೀರಲ್ಲಿ ನರಿಗಳೆಷ್ಟೋ
ನಾವೆಲ್ಲಾ ಒಂದೆನುವ ಸತ್ಯ ಮೆಟ್ಟಿದ ನಾಡಿ ಹರಿಗಳೆಷ್ಟೋ

ಕೆ.ಎಸ್. ನಿಸಾರ್ ಅಹಮದ್
ಭಾವಗೀತೆಯನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ

No comments: