ನಾಡ ದೇವಿಯೇ ಕಂಡೆ ನಿನ್ನ ಮಡಿಲಲ್ಲಿ ಎಂಥ ದೃಶ್ಯಾ
ನೋವು ನಲಿವು ಸಮ್ಮಿಶ್ರದಲ್ಲಿ ಎದೆಯಾಯಿತದಕೆ ವರ್ಷ
ಒ೦ದೆದೆಯ ಹಾಲ ಕುಡಿದವರ ನಡುವೆ ಎಷ್ಟೊಂದು ಭೇಧ ತಾಯೀ
ಒ೦ದೆ ನೆಲದ ರಸ ಹೀರಲೇನು ಸಿಹಿ ಕಹಿಯ ರುಚಿಯ ಕಾಯೀ
ಕತ್ತಲಲ್ಲಿ ಕಂಗೆಟ್ಟು ಎಡವಿ ತಡವರಿಸುತಿರಲು ಮಂದೀ
ಕಡೆಗಣಿಸುತವರ ನಡೆದಿರುವನೊಬ್ಬ ಸ್ವಹಿತಕ್ಕೆ ಹಿರಿದು ದೊಂದಿ
ಸಂಸ್ಕಾರವಿಲ್ಲ ಹೆಣಕೆಂದು ತಲೆಗೆ ಕೈ ಹೊತ್ತ ಬಡವನೊಬ್ಬ
ಇನ್ನೊಬ್ಬ ತಾನು ಆಚರಿಸುತಿರುವ ವೈಭವದ ಹುಟ್ಟುಹಬ್ಬಾ
ಅನ್ನವಿರದ ಹಸುಳೆಗಳ ತಬ್ಬಿ ಅಳುತಿರುವ ತಾಯ ಕಂಡೆ
ದುಃಖ ಪೂರ ಉಕ್ಕುಕ್ಕಿ ಮೊರೆಯೇ ಕೊಚ್ಚಿತ್ತು ಬಾಳ ದಂಡೆ
ನರನನ್ನೆ ಗಾಳವಾಗಿಸಿಯೇ ಬಾಳ ನೀರಲ್ಲಿ ನರಿಗಳೆಷ್ಟೋ
ನಾವೆಲ್ಲಾ ಒಂದೆನುವ ಸತ್ಯ ಮೆಟ್ಟಿದ ನಾಡಿ ಹರಿಗಳೆಷ್ಟೋ
ಕೆ.ಎಸ್. ನಿಸಾರ್ ಅಹಮದ್
ಈ ಭಾವಗೀತೆಯನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ
ನೋವು ನಲಿವು ಸಮ್ಮಿಶ್ರದಲ್ಲಿ ಎದೆಯಾಯಿತದಕೆ ವರ್ಷ
ಒ೦ದೆದೆಯ ಹಾಲ ಕುಡಿದವರ ನಡುವೆ ಎಷ್ಟೊಂದು ಭೇಧ ತಾಯೀ
ಒ೦ದೆ ನೆಲದ ರಸ ಹೀರಲೇನು ಸಿಹಿ ಕಹಿಯ ರುಚಿಯ ಕಾಯೀ
ಕತ್ತಲಲ್ಲಿ ಕಂಗೆಟ್ಟು ಎಡವಿ ತಡವರಿಸುತಿರಲು ಮಂದೀ
ಕಡೆಗಣಿಸುತವರ ನಡೆದಿರುವನೊಬ್ಬ ಸ್ವಹಿತಕ್ಕೆ ಹಿರಿದು ದೊಂದಿ
ಸಂಸ್ಕಾರವಿಲ್ಲ ಹೆಣಕೆಂದು ತಲೆಗೆ ಕೈ ಹೊತ್ತ ಬಡವನೊಬ್ಬ
ಇನ್ನೊಬ್ಬ ತಾನು ಆಚರಿಸುತಿರುವ ವೈಭವದ ಹುಟ್ಟುಹಬ್ಬಾ
ಅನ್ನವಿರದ ಹಸುಳೆಗಳ ತಬ್ಬಿ ಅಳುತಿರುವ ತಾಯ ಕಂಡೆ
ದುಃಖ ಪೂರ ಉಕ್ಕುಕ್ಕಿ ಮೊರೆಯೇ ಕೊಚ್ಚಿತ್ತು ಬಾಳ ದಂಡೆ
ನರನನ್ನೆ ಗಾಳವಾಗಿಸಿಯೇ ಬಾಳ ನೀರಲ್ಲಿ ನರಿಗಳೆಷ್ಟೋ
ನಾವೆಲ್ಲಾ ಒಂದೆನುವ ಸತ್ಯ ಮೆಟ್ಟಿದ ನಾಡಿ ಹರಿಗಳೆಷ್ಟೋ
ಕೆ.ಎಸ್. ನಿಸಾರ್ ಅಹಮದ್
ಈ ಭಾವಗೀತೆಯನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ
No comments:
Post a Comment