ಯಾವ ಮೋಹನ ಮುರಲಿ ಕರೆಯಿತು ದೂರ ತೀರಕೆ ನಿನ್ನನು
ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು
ಹೂವು ಹಾಸಿಗೆ, ಚಂದ್ರ, ಚಂದನ, ಬಾಹುಬಂಧನ, ಚುಂಬನ
ಬಯಕೆ ತೋಟದ ಬೇಲಿಯೊಳಗೆ ಕರಣಗಣದೀ ರಿಂಗಣ
ಸಪ್ತಸಾಗರದಾಚೆಯೆಲ್ಲೋ ಸುಪ್ತಸಾಗರ ಕಾದಿದೆ
ಮೊಳೆಯದಲೆಗಳ ಮೂಕ ಮರ್ಮರ ಇಂದು ಇಲ್ಲಿಗು ಹಾಯಿತೆ
ವಿವಶವಾಯಿತು ಪ್ರಾಣ ಹಾ! ಪರವಶವು ನಿನ್ನೀ ಚೇತನ
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ
ಯಾವ ಮೋಹನ ಮುರಲಿ ಕರೆಯಿತು ಇದ್ದಕಿದ್ದೊಲೆ ನಿನ್ನನು
ಯಾವ ಬೃಂದಾವನವು ಚಾಚಿತು ತನ್ನ ಮಿಂಚಿನ ಕೈಯನು
ಎಂ. ಗೋಪಾಲಕೃಷ್ಣ ಅಡಿಗ
ಈ ಭಾವಗೀತೆಯನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ
ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು
ಹೂವು ಹಾಸಿಗೆ, ಚಂದ್ರ, ಚಂದನ, ಬಾಹುಬಂಧನ, ಚುಂಬನ
ಬಯಕೆ ತೋಟದ ಬೇಲಿಯೊಳಗೆ ಕರಣಗಣದೀ ರಿಂಗಣ
ಸಪ್ತಸಾಗರದಾಚೆಯೆಲ್ಲೋ ಸುಪ್ತಸಾಗರ ಕಾದಿದೆ
ಮೊಳೆಯದಲೆಗಳ ಮೂಕ ಮರ್ಮರ ಇಂದು ಇಲ್ಲಿಗು ಹಾಯಿತೆ
ವಿವಶವಾಯಿತು ಪ್ರಾಣ ಹಾ! ಪರವಶವು ನಿನ್ನೀ ಚೇತನ
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ
ಯಾವ ಮೋಹನ ಮುರಲಿ ಕರೆಯಿತು ಇದ್ದಕಿದ್ದೊಲೆ ನಿನ್ನನು
ಯಾವ ಬೃಂದಾವನವು ಚಾಚಿತು ತನ್ನ ಮಿಂಚಿನ ಕೈಯನು
ಎಂ. ಗೋಪಾಲಕೃಷ್ಣ ಅಡಿಗ
ಈ ಭಾವಗೀತೆಯನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ
No comments:
Post a Comment