ಹಾಲು ಹಳ್ಳ ಹರಿಯಲಿ
ಬೆಣ್ಣೆ ಬೆಟ್ಟವಾಗಲಿ
ಜೇನು ಮಳೆಯು ಸುರಿಯಲಿ
ತೊಟ್ಟಿಲೊಲಿದು ತೂಗಲಿ
ಪೈರು ಪಚ್ಚೆ ಬೆಳೆಯಲಿ
ತೆನೆಯ ಚಿನ್ನ ಹೊಳೆಯಲಿ
ಹಕ್ಕಿ ಹೊಟ್ಟೆ ತಣಿಯಲಿ
ಮಿಗವು ಸೊಗಸಿ ನಲಿಯಲಿ
ಮುಗಿದು ಸಮರ ನರಗಲಿ
ನರರು ನರರ ನಂಬಲಿ
ಸ್ವಾಮಿ ಅಮೃತ ಕೃಪೆಯಲಿ
ಶಾಂತಿ ಜಗವ ತುಂಬಲಿ
ಬೆಣ್ಣೆ ಬೆಟ್ಟವಾಗಲಿ
ಜೇನು ಮಳೆಯು ಸುರಿಯಲಿ
ತೊಟ್ಟಿಲೊಲಿದು ತೂಗಲಿ
ಪೈರು ಪಚ್ಚೆ ಬೆಳೆಯಲಿ
ತೆನೆಯ ಚಿನ್ನ ಹೊಳೆಯಲಿ
ಹಕ್ಕಿ ಹೊಟ್ಟೆ ತಣಿಯಲಿ
ಮಿಗವು ಸೊಗಸಿ ನಲಿಯಲಿ
ಮುಗಿದು ಸಮರ ನರಗಲಿ
ನರರು ನರರ ನಂಬಲಿ
ಸ್ವಾಮಿ ಅಮೃತ ಕೃಪೆಯಲಿ
ಶಾಂತಿ ಜಗವ ತುಂಬಲಿ
ಕುವೆಂಪು
ಈ ಭಾವಗೀತೆಯನ್ನು ಕೇಳಲು ಇಲ್ಲಿ ಕ್ಲಿಕ್
ಮಾಡಿ
No comments:
Post a Comment