ಮನದ ಹಂಬಲದ ಕನಸೆಲ್ಲವೂ
ಮಂಜಂತೆ ಕರಗಿ ಮರೆಯಾಯಿತೆ
ಸೆಲೆ ಬತ್ತಿತೆ ಆ ಪ್ರೀತಿಯ ಹೊಳೆ
ಜೊಳ್ಳಾಯಿತೆ ಆ ಸ್ನೇಹದ ಬೆಳೆ
ಏಕಾಂತವೇ ಈ ಬಾಳಿನ ನೆಲೆ
ಮನಸು ವಿಷಾದಕೆ ಸೆರೆಯಾಯಿತೆ
ಎರಗಿ ಬಿರುಗಾಳಿ, ಬಡಿದು ಸಿಡಿಲು
ನಡುಗಡಲಿನಲ್ಲಿ ಒಡೆದ ಹಡಗು
ನೆರವಿರದೆ ಸೋತು, ತೇಲು ಮುಳುಗು
ಬದುಕು ಹತಾಶೆಗೆ ವಶವಾಯಿತೆ
ಈ ಬಾಳಿಗುಂಟೆ ಮರುವಸಂತ
ಈ ಪಯಣಕುಂಟೆ ಹೊಸ ದಿಗಂತ
ಬೆಳಕು ಮೂಡೀತೆ ಇರುಳು ಕಳೆದು
ಹೊಸ ಅಂಕಕಾಗಿ ತೆರೆ ಸರಿವುದೆ
ಮಂಜಂತೆ ಕರಗಿ ಮರೆಯಾಯಿತೆ
ಸೆಲೆ ಬತ್ತಿತೆ ಆ ಪ್ರೀತಿಯ ಹೊಳೆ
ಜೊಳ್ಳಾಯಿತೆ ಆ ಸ್ನೇಹದ ಬೆಳೆ
ಏಕಾಂತವೇ ಈ ಬಾಳಿನ ನೆಲೆ
ಮನಸು ವಿಷಾದಕೆ ಸೆರೆಯಾಯಿತೆ
ಎರಗಿ ಬಿರುಗಾಳಿ, ಬಡಿದು ಸಿಡಿಲು
ನಡುಗಡಲಿನಲ್ಲಿ ಒಡೆದ ಹಡಗು
ನೆರವಿರದೆ ಸೋತು, ತೇಲು ಮುಳುಗು
ಬದುಕು ಹತಾಶೆಗೆ ವಶವಾಯಿತೆ
ಈ ಬಾಳಿಗುಂಟೆ ಮರುವಸಂತ
ಈ ಪಯಣಕುಂಟೆ ಹೊಸ ದಿಗಂತ
ಬೆಳಕು ಮೂಡೀತೆ ಇರುಳು ಕಳೆದು
ಹೊಸ ಅಂಕಕಾಗಿ ತೆರೆ ಸರಿವುದೆ
ಬಿ.ಆರ್. ಲಕ್ಷ್ಮಣರಾವ್
ಈ ಭಾವಗೀತೆಯನ್ನು ಕೇಳಲು ಇಲ್ಲಿ ಕ್ಲಿಕ್
ಮಾಡಿ
No comments:
Post a Comment