Friday, January 3, 2014

ಮನದ ಹಂಬಲದ ಕನಸೆಲ್ಲವೂ

ಮನದ ಹಂಬಲದ ಕನಸೆಲ್ಲವೂ
ಮಂಜಂತೆ ಕರಗಿ ಮರೆಯಾಯಿತೆ

ಸೆಲೆ ಬತ್ತಿತೆ ಆ ಪ್ರೀತಿಯ ಹೊಳೆ
ಜೊಳ್ಳಾಯಿತೆ ಆ ಸ್ನೇಹದ ಬೆಳೆ
ಏಕಾಂತವೇ ಈ ಬಾಳಿನ ನೆಲೆ
ಮನಸು ವಿಷಾದಕೆ ಸೆರೆಯಾಯಿತೆ

ಎರಗಿ ಬಿರುಗಾಳಿ, ಬಡಿದು ಸಿಡಿಲು
ನಡುಗಡಲಿನಲ್ಲಿ ಒಡೆದ ಹಡಗು
ನೆರವಿರದೆ ಸೋತು, ತೇಲು ಮುಳುಗು
ಬದುಕು ಹತಾಶೆಗೆ ವಶವಾಯಿತೆ

ಈ ಬಾಳಿಗುಂಟೆ ಮರುವಸಂತ
ಈ ಪಯಣಕುಂಟೆ ಹೊಸ ದಿಗಂತ
ಬೆಳಕು ಮೂಡೀತೆ ಇರುಳು ಕಳೆದು
ಹೊಸ ಅಂಕಕಾಗಿ ತೆರೆ ಸರಿವುದೆ

ಬಿ.ಆರ್. ಲಕ್ಷ್ಮಣರಾವ್
ಭಾವಗೀತೆಯನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ

No comments: