ವಿದಾಯ : ಡಾ|| ಯು.ಆರ್. ಅನಂತಮೂರ್ತಿ

ಕನ್ನಡ ಪ್ರಭ ಸುದ್ದಿ
ಡಾ|| ಯು.ಆರ್. ಅನಂತಮೂರ್ತಿ ಇನ್ನಿಲ್ಲ
ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅನಂತಮೂರ್ತಿ ಅವರನ್ನು ಇಂದು ಬೆಳಗ್ಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ, ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಂಜೆ 6 ಗಂಟೆ ವೇಳೆಗೆ ಲಘು ಹೃದಯಾಘಾತವಾಗಿ, ನಂತರ ಚೇತರಿಕೆ ಕಾಣದೆ ಕೊನೆಯುಸಿರೆಳೆದರು ಎಂದು ಮಣಿಪಾಲ್ ಆಸ್ಪತ್ರೆಯ ಹಿರಿಯ ವೈದ್ಯರಾದ ಡಾ. ಸುದರ್ಶನ್ ಬಲ್ಲಾಳ್ ತಿಳಿಸಿದರು.
ಅನಂತಮೂರ್ತಿ ಅವರು ನಡೆದು ಬಂದ ಹಾದಿ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಳಿಗೆ ಗ್ರಾಮದಲ್ಲಿ 1932ರ ಡಿಸೆಂಬರ್ 21ರಂದು ಜನಿಸಿದ್ದ ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಇನ್ನಿಲ್ಲ. ಇನ್ನು ಮುಂದೆ ಅವರು ನನೆಪು ಮಾತ್ರ.
ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ಕನ್ನಡಕ್ಕೆ ತಂದ ಆರನೇಯವರು. ಸಮಗ್ರ ಸಾಹಿತ್ಯಕ್ಕೆ ಜ್ಞಾನಪೀಠ ಪ್ರಶಸ್ತಿ ದೊರಕಿದೆ. 1998ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಕೇಂದ್ರ ಸರ್ಕಾರ ಗೌರವಿಸಿತ್ತು.
ಇಂಗ್ಲೀಷ್ ಮತ್ತು ತೌಲನಿಕ ಸಾಹಿತ್ಯ ಕುರಿತು ಪಿಎಚ್ಡಿ(ಬರ್ಮಿಂಗ್ಹ್ಯಾಮ್ ವಿವಿ, ಯುನೈಟೆಡ್ ಕಿಂಗ್ಡಂ) 1966. ಸಂಸ್ಕೃತ ಶಾಲೆಯಲ್ಲಿ ವಿದ್ಯಾಭ್ಯಾಸ ಆರಂಭಿಸಿದ ಇವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಕಲಾ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.
1970ರಲ್ಲಿ ಮೈಸೂರು ವಿಶ್ವವಿದ್ಯಾಲಯದಲ್ಲೇ ಇಂಗ್ಲೀಷ್ ಬೋಧಕರಾಗಿ ಸೇವೆ ಆರಂಭಿಸಿ ತದ ನಂತರ 1987ರಲ್ಲಿ ಕೇರಳದ ತಿರುವಂತನಪುರಂನಲ್ಲಿರುವ ಕೇರಳ ವಿಶ್ವವಿದ್ಯಾಲಯದಲ್ಲಿ ಉಪಕುಲಪತಿಗಳಾಗಿದ್ದರು. 1993ರಲ್ಲಿ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಜವಹರಲಾಲ್ ನೆಹರು ವಿಶ್ವವಿದ್ಯಾಲಯ, ಈಬರ್ಹಾರ್ಡ್ ವಿಶ್ವವಿದ್ಯಾಲಯ, ಲೋವಾ ವಿಶ್ವವಿದ್ಯಾಲಯ, ಟಫ್ಟ್ಸ್ ವಿಶ್ವವಿದ್ಯಾಲಯ, ಶಿವಾಜಿ ವಿಶ್ವವಿದ್ಯಾಲಯದಲ್ಲಿ ಸೇರಿದಂತೆ ಭಾರತ ಮತ್ತು ವಿದೇಶಗಳ ವಿಶ್ವವಿದ್ಯಾಲಯಗಳಲ್ಲಿ ಬೋಧಕರಾಗಿ ಸೇವೆ ಸಲ್ಲಿಸಿದ್ದಾರೆ.
ಸಂಸ್ಕಾರ, ಭವ, ಭಾರತೀಪುರ ಮತ್ತು ಅವಸ್ಥೆ ಕಾದಂಬರಿಗಳು ಸೇರಿದಂತೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ಇವರ ಅನೇಕ ಪುಸ್ತಕಗಳು ಯೂರೋಪಿಯನ್ ಭಾಷೆ ಸೇರಿದಂತೆ ಭಾರತ ಅನೇಕ ಭಾಷೆಗಳಿಗೆ ಭಾಷಾಂತರಗೊಂಡಿದೆ. ಅವರು ಬರೆದಂತೆ ಕಾದಂಬರಿಗಳಲ್ಲಿ ಕೆಲವು ಚಲನಚಿತ್ರವಾಗಿ ಮೂಡಿ ಬಂದಿದೆ.
ಪ್ರಶಸ್ತಿಗಳು:
- ಬಷೀರ್ ಪುರಸ್ಕಾರಂ, ಕೇರಳ, 2012
- ಗೌರವ ಡಾಕ್ಟರೇಟ್, ಕೇಂದ್ರೀಯ ವಿವಿ, ಗುಲ್ಬರ್ಗ, 2012
- ಗೌರವ ಡಾಕ್ಟರೇಟ್, ಕಲ್ಕತ್ತಾ ವಿವಿ, 2012
- ರವೀಂದ್ರನಾಥ್ ಟ್ಯಾಗೋರ್ ಸ್ಮಾರಕ ಪದಕ, ಕಲ್ಕತ್ತಾ ವಿವಿ, 2012
- ಫಕೀರ್ ಮೋಹನ್ ಸೇನಾಪತಿ ರಾಷ್ಟ್ರೀಯ ಪುರಸ್ಕಾರ, ಒರಿಸ್ಸಾ, 2012
- ದಿ ಹಿಂದೂ ಲಿಟರೆರಿ ಪ್ರಶಸ್ತಿ, 2011
- ಗಣಕ್ಸೃಷ್ಟಿ ಪ್ರಶಸ್ತಿ, ಕೊಲ್ಕತ್ತ, 2002
- ಕನ್ನಡ ವಿಶ್ವವಿದ್ಯಾಲಯದಿಂದ 'ನಾಡೋಜ' 2008
- ಪದ್ಮಭೂಷಣ, 1998
- ಮಾಸ್ತಿ, 1995
- ಜ್ಞಾನಪೀಠ ಪ್ರಶಸ್ತಿ, 1994
- ರಾಜ್ಯೋತ್ಸವ ಪ್ರಶಸ್ತಿ, 1984
ಸಣ್ಣ ಕಥೆಗಳು
- ಎಂದೆಂದಿಗೂ ಮುಗಿಯದ ಕಥೆ
- ಮೌನಿ
- ಪ್ರಶ್ನೆ
- ಕ್ಲಿಫ್ ಜಾಯಿಂಟ್
- ಆಕಾಶ ಮತ್ತು ಬೆಕ್ಕು
- ಎರಡು ದಶಕದ ಕಥೆಗಳು
- ಐದು ದಶಕದ ಕಥೆಗಳು
ಕಾದಂಬರಿಗಳು
- ಸಂಸ್ಕಾರ
- ಭಾರತೀಪುರ
- ಅವಸ್ಥೆ
- ಭವ
- ದಿವ್ಯಾ
ನಾಟಕ
- ಆವಾಹನೆ
ವಿಮರ್ಶೆ ಮತ್ತು ಪ್ರಬಂಧ
- ಪ್ರಜ್ಞೆ ಮತ್ತು ಪರಿಸರ
- ಸನ್ನಿವೇಶ
- ಸಮಕ್ಷಮ
- ಪೂರ್ವಾಪರ
- ಯುಗಪಲ್ಲಟ
- ವಾಲ್ಮಿಕಿಯ ನೆವದಲ್ಲಿ
- ಮಾತು ಸೋತ ಭಾರತ
- ಸದ್ಯ ಮತ್ತು ಶಾಶ್ವತ
ಚಲನಚಿತ್ರವಾಗಿ ಮೂಡಿಬಂದ ಕಾದಂಬರಿಗಳು
- ಸಂಸ್ಕಾರ
- ಬರ
- ಅವಸ್ಥೆ
- ಮೌನಿ
- ದೀಕ್ಷಾ
- ಭಾರತೀಪುರ
No comments:
Post a Comment