ಹರವು ಸ್ಫೂರ್ತಿ ಗೌಡ ಅವರು ‘ಅವಧಿ’ಯಲ್ಲಿ ೬-೩-೧೫ರಂದು ಬರೆದಿರುವ ‘ಭೈರಪ್ಪನವರಿಗೆ ಕೆಲವು ಪ್ರಶ್ನೆಗಳು’ ಲೇಖನದಲ್ಲಿ ಭೈರಪ್ಪನವರು ಮಹಾಭಾರತವನ್ನು ಆಧರಿಸಿ ಬರೆದಿರುವ ಪರ್ವ ಕಾದಂಬರಿಯ ಬಗ್ಗೆ ಪ್ರಸ್ತಾಪಿಸಿರುಪ ಪ್ರಶ್ನೆಗಳನ್ನು ಕುರಿತಂತೆ ಕೆಲವು ವಿಷಯಗಳನ್ನು ನಿಲುಮೆಯ ಓದುಗರ ಜತೆ ಹಂಚಿಕೊಳ್ಳುವುದು ಈ ನನ್ನ ಬರಹದ ಉದ್ದೇಶ. ಸ್ಪೂರ್ತಿ ಗೌಡ ಅವರ ಲೇಖನಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ. ಅವುಗಳು ಸದ್ಯದ ನಮ್ಮ ಓದುಗರ ಮನೋಭಾವ, ಅವರ ಓದಿನ ರೀತಿ ನೀತಿ, ಕನ್ನಡ ಸಾಹಿತ್ಯದ ಸದ್ಯದ ವಿಮರ್ಶೆಯ ವಾತಾವರಣ ಇತ್ಯಾದಿಗಳ ಪ್ರತಿಫಲನದಂತೆ ಇದೆ. ಇದು ಸಹಜ.ಆ ಪ್ರತಿಕ್ರಿಯೆಗಳ ಬಗ್ಗೆ ಇದಕ್ಕಿಂತ ಹೆಚ್ಚೇನು ಹೇಳುವುದು ಇಲ್ಲ.
ಸ್ಫೂರ್ತಿ ಗೌಡ ಅವರು ‘ಪರ್ವ’ದ ಬಗ್ಗೆ random ಆಗಿ ಎತ್ತಿರುವ ಮೂರ್ನಾಲಕ್ಕು ಆಕ್ಷೇಪಣೆಗಳು ಮತ್ತು ಉಪ ಆಕ್ಷೇಪಣೆಗಳ relevanceಗೆ ಮಾತ್ರ ನನ್ನ ಈ ಬರಹ ಸೀಮಿತವಾಗಿದೆ. ಇತಿಹಾಸ, ಕಾವ್ಯ ಮತ್ತು ಪುರಾಣಗಳು ಬೆರೆತಿರುವ ಮಹಾಭಾರತದ ಕತೆಯನ್ನು ಈಗ ಚಾಲ್ತಿಯಲ್ಲಿರುವ ವಿಮರ್ಶೆಯ ಅಳತೆಗೋಲಿನಿಂದ ಅಳೆದು ಬೆಲೆ ಕಟ್ಟುವ ಕ್ರಿಯೆಯೇ ಸರಿಯಾದುದಲ್ಲ. ಇಂದು ನಮ್ಮ ಸಾಹಿತ್ಯದ ವಿಮರ್ಶಕ ಮತ್ತು ವಿಮರ್ಶಕಿಯರಿಗೆ ಹಿಂದಿನ ಮತ್ತು ಇಂದಿನ ಕೃತಿಗಳಿಗೆ (ಅದು ಸಾಮಾಜಿಕ/ಐತಿಹಾಸಿಕ/ಪೌರಾಣಿಕ ಯಾವುದೇ ಆಗಿರಲಿ) ಪ್ರಗತಿಗಾಮಿ.ಪ್ರತಿಗಾಮಿ,ಮಹಿಳಾ ವಿರೋಧಿ,ವೈದಿಕ ಶಾಹಿ ಇತ್ಯಾದಿ ಹಣೆ ಪಟ್ಟಿಗಳನ್ನು ಕಟ್ಟಿ ಆ ಕೃತಿಗಳ ಲೇಖಕರನ್ನು ಏರಿಸುವುದೋ ಇಳಿಸುವುದೋ ಮಾಡುವುದು ತುಂಬಾ ಖುಷಿ ಕೊಡುವ ಕೆಲಸವಾಗಿದೆ. ಹಾಗೆ ನೋಡಿದರೆ ಇಂತಹ ವಿದ್ಯಮಾನ ಮೂವತ್ತು ನಲವತ್ತು ವರ್ಷಗಳಷ್ಟು ಹಳೆಯದೇ. ಈಗ ಈ ಕೆಲಸ ಇನ್ನೂ ಜೋರಾಗಿದೆ ಅಷ್ಟೇ. ವಿಮರ್ಶೆಯ ಪರಿಭಾಷೆಗಳು ಕಾಲದಿಂದ ಕಾಲಕ್ಕೆ ಬದಲಾಗುತ್ತವೆ; ಬದಲಾಗಬೇಕು ಎಂಬುದರ ಬಗ್ಗೆ ಯಾರೂ ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದಿಲ್ಲ. ಆದರೆ ಬದಲಾಗುತ್ತಿರುವ ವಿಮರ್ಶೆಯ ಪರಿಭಾಷೆಗಳನ್ನು ಸಾಹಿತ್ಯ ಕೃತಿಯೊಂದಕ್ಕೆ ನಾವು ಯಾವ ರೀತಿ apply ಮಾಡಬೇಕು? ಆ ಪರಿಭಾಷೆಗಳ limits ಏನು? ಎಂಬುದರ ಬಗ್ಗೆ ನಾವು ಯೋಚಿಸದಿದ್ದರೆ ಆಭಾಸವಾಗುತ್ತದೆ. ಸ್ಪೂರ್ತಿಗೌಡ ಅವರು ಪರ್ವದ ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯಗಳಿಗೆ ಮೂಲ ಕಾರಣ ಹೊಸ ವಿಮರ್ಶೆಯ ಪರಿಭಾಷೆಗಳ wrong application.
ಸ್ಫೂರ್ತಿ ಗೌಡ ಅವರು ‘ಪರ್ವ’ದ ಬಗ್ಗೆ random ಆಗಿ ಎತ್ತಿರುವ ಮೂರ್ನಾಲಕ್ಕು ಆಕ್ಷೇಪಣೆಗಳು ಮತ್ತು ಉಪ ಆಕ್ಷೇಪಣೆಗಳ relevanceಗೆ ಮಾತ್ರ ನನ್ನ ಈ ಬರಹ ಸೀಮಿತವಾಗಿದೆ. ಇತಿಹಾಸ, ಕಾವ್ಯ ಮತ್ತು ಪುರಾಣಗಳು ಬೆರೆತಿರುವ ಮಹಾಭಾರತದ ಕತೆಯನ್ನು ಈಗ ಚಾಲ್ತಿಯಲ್ಲಿರುವ ವಿಮರ್ಶೆಯ ಅಳತೆಗೋಲಿನಿಂದ ಅಳೆದು ಬೆಲೆ ಕಟ್ಟುವ ಕ್ರಿಯೆಯೇ ಸರಿಯಾದುದಲ್ಲ. ಇಂದು ನಮ್ಮ ಸಾಹಿತ್ಯದ ವಿಮರ್ಶಕ ಮತ್ತು ವಿಮರ್ಶಕಿಯರಿಗೆ ಹಿಂದಿನ ಮತ್ತು ಇಂದಿನ ಕೃತಿಗಳಿಗೆ (ಅದು ಸಾಮಾಜಿಕ/ಐತಿಹಾಸಿಕ/ಪೌರಾಣಿಕ ಯಾವುದೇ ಆಗಿರಲಿ) ಪ್ರಗತಿಗಾಮಿ.ಪ್ರತಿಗಾಮಿ,ಮಹಿಳಾ ವಿರೋಧಿ,ವೈದಿಕ ಶಾಹಿ ಇತ್ಯಾದಿ ಹಣೆ ಪಟ್ಟಿಗಳನ್ನು ಕಟ್ಟಿ ಆ ಕೃತಿಗಳ ಲೇಖಕರನ್ನು ಏರಿಸುವುದೋ ಇಳಿಸುವುದೋ ಮಾಡುವುದು ತುಂಬಾ ಖುಷಿ ಕೊಡುವ ಕೆಲಸವಾಗಿದೆ. ಹಾಗೆ ನೋಡಿದರೆ ಇಂತಹ ವಿದ್ಯಮಾನ ಮೂವತ್ತು ನಲವತ್ತು ವರ್ಷಗಳಷ್ಟು ಹಳೆಯದೇ. ಈಗ ಈ ಕೆಲಸ ಇನ್ನೂ ಜೋರಾಗಿದೆ ಅಷ್ಟೇ. ವಿಮರ್ಶೆಯ ಪರಿಭಾಷೆಗಳು ಕಾಲದಿಂದ ಕಾಲಕ್ಕೆ ಬದಲಾಗುತ್ತವೆ; ಬದಲಾಗಬೇಕು ಎಂಬುದರ ಬಗ್ಗೆ ಯಾರೂ ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದಿಲ್ಲ. ಆದರೆ ಬದಲಾಗುತ್ತಿರುವ ವಿಮರ್ಶೆಯ ಪರಿಭಾಷೆಗಳನ್ನು ಸಾಹಿತ್ಯ ಕೃತಿಯೊಂದಕ್ಕೆ ನಾವು ಯಾವ ರೀತಿ apply ಮಾಡಬೇಕು? ಆ ಪರಿಭಾಷೆಗಳ limits ಏನು? ಎಂಬುದರ ಬಗ್ಗೆ ನಾವು ಯೋಚಿಸದಿದ್ದರೆ ಆಭಾಸವಾಗುತ್ತದೆ. ಸ್ಪೂರ್ತಿಗೌಡ ಅವರು ಪರ್ವದ ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯಗಳಿಗೆ ಮೂಲ ಕಾರಣ ಹೊಸ ವಿಮರ್ಶೆಯ ಪರಿಭಾಷೆಗಳ wrong application.
ಪರ್ವ ವ್ಯಾಸರ ಸಂಸ್ಕೃತ ಮಹಾಭಾರತದ ಕಥಾ ಚೌಕಟ್ಟಿನಲ್ಲಿ ರಚಿತವಾಗಿರುವ ಕಾದಂಬರಿ. ಆ ಕಥಾ ಚೌಕಟ್ಟಿನ ಒಳಗೆ ವ್ಯಾಸರ ಮೂಲ ಕೃತಿಗೆ ಚ್ಯುತಿ ಬಾರದಂತೆ ಅಲ್ಪ ಸ್ವಲ್ಪ ಬದಲಾವಣೆಗಳು . ಪಾಂಡವ-ಕೌರವರ ಕಥನಕ್ಕೆ ಅಷ್ಟೇನೂ ಅನಿವಾರ್ಯವಲ್ಲದ ನೂರಾರು ಉಪಕಥೆಗಳು, ಪ್ರಸಂಗಗಳನ್ನು ಬಿಟ್ಟುಬಿಡುವುದು ಮತ್ತು ‘ಪರ್ವ’ ಕಾದಂಬರಿಯ ತಂತ್ರದ ಅನುಕೂಲಕ್ಕಾಗಿ ಒಂದೆರೆಡು ಹೊಸ ಪಾತ್ರಗಳ ಸೃಷ್ಟಿ (ದಾಸಿ, ಸೇವಕ, ಸಾರಥಿ ಇತ್ಯಾದಿ) ಇವುಗಳನ್ನು ಮಾಡಬಹುದೇ ಹೊರತು ಪೂರ್ತಿ ಕಥೆಯನ್ನೇ ಬದಲಾಯಿಸಿದರೆ ಅದು ವ್ಯಾಸರ ಕಥಾ ಚೌಕಟ್ಟನ್ನು ಮೀರಿದಂತೆ ಆಗುತ್ತದೆ.ಹಾಗಾದರೆ ದಾಸಿ, ಸೇವಕ ಸಾರಥಿ ಇವರುಗಳು ಕೀಳು ಪಾತ್ರಗಳೋ ಎಂದು ಕೇಳುವುದರಲ್ಲಿ ಅರ್ಥವಿಲ್ಲ. ನಾವು ಇಂದು ದಿನ ನಿತ್ಯ ಪ್ರಯಾಣಿಸುವ ಬಸ್ಸಿನ ಡ್ರೈವರ್ , ರಿಕ್ಷಾ ಚಾಲಕರು ಇರುವಂತೆ ಹಿಂದೆ ರಥಕ್ಕೆ ಸಾರಥಿಗಳಿದ್ದರು ಅಷ್ಟೇ.ಒಮ್ಮೆ ಭೀಮ ಪ್ರಯಾಣಿಸುವಾಗ ತನ್ನ ಯೋಚನೆಗಳನ್ನು, ಹಿಂದಿನ ಕಥೆಯನ್ನು ತನ್ನ ರಥದ ಸಾರಥಿಗೆ ಹೇಳುತ್ತಾ ಹೋಗುತ್ತಾನೆ. ಕೆಲವೊಮ್ಮೆ ತಾನೇ ಯೋಚಿಸುತ್ತಾ ಹೋಗುತ್ತಾನೆ. ವ್ಯಾಸ ಭಾರತದಲ್ಲೂ ಭೀಮ ರಾಕ್ಷಸರನ್ನು ಕೊಂದಿದ್ದು,ರಾಕ್ಷಸ ಕುಲದ ಸಾಲಕಟಂಕಟಿಯನ್ನು ಮದುವೆಯಾಗಿದ್ದು ಅವರಿಬ್ಬರಿಗೆ ಘಟೋದ್ಗಜ ಹುಟ್ಟಿದ ಪ್ರಸಂಗ ಬರುತ್ತದೆ. ಆ ನಂತರ ಅಲ್ಲಿಂದ ಭೀಮ ಹೊರಟುಹೋಗಿದ್ದೂ ಇದೆ. ಇದನ್ನು ಪುರುಷ ಪ್ರಧಾನ ಸಮಾಜ, ಮನು ಶಾಸ್ತ್ರ ವೇದ ಪುರಾಣ ಇತ್ಯಾದಿಗಳನ್ನೆಲ್ಲಾ ಹೇಳಿ ಸಾಲಕಟಂಕಟಿಗೆ ಮೋಸ ಆಯ್ತು ಎಂದು ಸ್ಫೂರ್ತಿ ಗೌಡ ಅವರು ಟೀಕಿಸುವುದರಲ್ಲಿ ಅರ್ಥವಿಲ್ಲ. ಇಂದು ಜಾತಿ ಜಾತಿಗಳಿಗೆ, ಬುಡಕಟ್ಟು ಜನತೆಗೆ ತಮ್ಮ ತಮ್ಮ ಆಚಾರ ವಿಚಾರಗಳಲ್ಲಿ ಭಿನ್ನತೆ ಇರುವಂತೆ ಹಿಂದೆಯೂ ಇದ್ದವು.ಈ ಜಾತಿ ಬೇಧ ತಪ್ಪು, ಇದು ಶೋಷಣೆ ಎಂಬ ಮಾತುಗಳು ಪರ್ವ ಕಾದಂಬರಿಯ ವಿಮರ್ಶೆಯ ಚೌಕಟ್ಟನ್ನು ಮೀರಿದ್ದು. ಅದಕ್ಕೆ ಬೇರೆ ವೇದಿಕೆ ಇದೆ. ಅದೇ ರೀತಿ ದ್ರಾವಿಡ ವರ್ಣ, ಮೀನು ಹಿಡಿಯುವ ಜಾತಿ ಕೀಳೆ ಎಂಬ ಮಾತುಗಳೂ ಅರ್ಥವಿಲ್ಲದ್ದು.
ಮಹಾಭಾರತ ಮತ್ತು ಪರ್ವದಲ್ಲಿ ಆರ್ಯ ಮತ್ತು ಆರ್ಯೇತರ ಎಂದು ಹೇಳಿರುವುದನ್ನು ಸ್ಫೂರ್ತಿ ಅವರು ಆರ್ಯ ಮತ್ತು ದ್ರಾವಿಡ ಎಂದು ತಮ್ಮ ವಾದಕ್ಕೆ ತಕ್ಕಂತೆ ಬದಲಾಯಿಸಿಕೊಂಡರೆ ಅದು ಭೈರಪ್ಪನವರ ತಪ್ಪೇ? ಬಡತನ, ಗುಡಿಸಲು,ಕಪ್ಪು ವರ್ಣದ ಹೆಂಗಸಿನ ಮೇಲೆ ತಿರಸ್ಕಾರವೇಕೆ ಎಂಬ ಮಾತುಗಳೂ ಇದೇ ರೀತಿ context ಅನ್ನು ಮರೆತು ಇಂದಿನ ವಿಮರ್ಶೆಯ ಪರಿಭಾಷೆಯಲ್ಲಿ ಆಡಿದ ಮಾತುಗಳು. ಪರ್ವದಲ್ಲಿ ಭೈರಪ್ಪನವರು ಮಹಾಭಾರತ ಮತ್ತು ನಮ್ಮ ಭಾರತ ದೇಶದ ಜಾತಿ ಪದ್ಧತಿ ಸರಿಯೋ ತಪ್ಪೋ ಎಂಬುದರ ಮೇಲೆ ವ್ಯಾಖ್ಯಾನ ಮಾಡಿಲ್ಲ. ಸುಮಾರು ಮೂರ್ನಾಲಕ್ಕು ಸಾವಿರದಷ್ಟು ಹಿಂದಿನ ಕಥೆಯನ್ನು ನಮ್ಮ ಇಂದಿನ ಜೀವನದ ದೃಷ್ಟಿಕೋನದಿಂದ ಅಳೆಯುವುದೇ ತಪ್ಪಾಗುತ್ತದೆ. ಹೀಗಾಗಿ ಸ್ಫೂರ್ತಿ ಗೌಡ ಅವರು ಭೈರಪ್ಪನವರ ಮೇಲೆ ಹಾಕಿರುವ FIR ಮತ್ತು charge sheet ನೇರವಾಗಿ ಮೂಲ ಮಹಾಭಾರತಕ್ಕೆ ಸಂಬಂಧಿಸಿದ್ದು. ಇದನ್ನು ನಾವು ಮರೆಯಬಾರದು. ಅಂತಹ ಕಥೆಯನ್ನು ಒದಲೇಬಾರದು , ವಿರೋಧಿಸಬೇಕು ಎಂಬುದು ಸ್ಫೂರ್ತಿ ಗೌಡ ಮತ್ತು ಅವರ ಲೇಖನಕ್ಕೆ ಸಹಮತ ವ್ಯಕ್ತಪಡಿಸಿರುವ ಓದುಗರ ಅಭಿಪ್ರಾಯವಾದರೆ ಅವರು ಆ ರೀತಿ ಮಾಡಲು ಸ್ವತಂತ್ರರು.
ಕೊನೆಯದಾಗಿ ಒಂದೆರೆಡು ಮಾತು. ಪರ್ವವನ್ನು ಪೂರ್ತಿ ಓದಿರುವವರು ಆ ಕಾದಂಬರಿಯ ಶಕ್ತಿ ಮತ್ತು ದೌರ್ಬಲ್ಯಗಳನ್ನು ಅರಿಯುವ ಆಸಕ್ತಿ ಇದ್ದರೆ ಈ ಕೆಳಗಿನ ಪುಸ್ತಕಗಳನ್ನು ಓದಬಹುದು.
೧. ಯುಗಾಂತ –ಇರಾವತಿ ಕರ್ವೆ ( ಪ್ರಕಾಶಕರು- ಕೇಂದ್ರ ಸಾಹಿತ್ಯ ಅಕಾಡೆಮಿ ನವದೆಹಲಿ) — ಇದರ ಕನ್ನಡ ಅನುವಾದ ಇದೆ.
೨. ಎಸ್ ಎಲ್ ಭೈರಪ್ಪನವರ ಪರ್ವ ಒಂದು ಸಮೀಕ್ಷೆ–ಸಂಪಾದಕಿ ವಿಜಯಾ (ಪ್ರಕಾಶಕರು–ಇಳಾ ಪ್ರಕಾಶನ. ಬೆಂಗಳೂರು-೧೮)
೩. ಎಸ್ ಎಲ್ ಭೈರಪ್ಪನವರ ‘ನಾನೇಕೆ ಬರೆಯುತ್ತೇನೆ? ಕೃತಿಯಲ್ಲಿರುವ ಪರ್ವ ಬರೆದಿದ್ದು ಎಂಬ ಲೇಖನ. (ಪ್ರಕಾಶಕರು -ಸಾಹಿತ್ಯ ಭಂಡಾರ ಬೆಂಗಳೂರು–೫೩)
- ಮು.ಅ. ಶ್ರೀರಂಗ
"ನಿಲುಮೆ" ಅಂತರ್ಜಾಲ ತಾಣದಿಂದ